ವಚನವೊಂದರ ವಿಶ್ಲೇಷಣೆ
ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ ; ಸುತ್ತಿಸುಳಿದು ನೋಡದಂತೆ ಅಂಧಕನ ಮಾಡಯ್ಯ ತಂದೆ ; ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯ ತಂದೆ; ನಿಮ್ಮ ಶರಣ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ ಇರಿಸು; ಕೂಡಲಸಂಗಮದೇವಾ . ಪ್ರೊ . ಎಂ . ಜಿ .ಕೃಷ್ಣಮೂರ್ತಿಯವರು ಈ ವಚನವನ್ನು ಬಹಳ ಸಮರ್ಥವಾಗಿ ವಿಶ್ಲೇಷಣೆ ಮಾಡುತ್ತಾ : ೧)ಕವನದ ಮೊದಲು ಮೂರು ಸಾಲುಗಳಲ್ಲಿ ‘ತಂದೆ’ ಪದದ ಪುನುರುಕ್ತಿ ಹಾಗೂ ಆ ಪದದ ಸಾಮಾನ್ಯ ಮತ್ತು ಧ್ವನಿತಾರ್ಥಗಳನ್ನು ಗುರುತಿಸಿದ್ದಾರೆ. ೨)ಮೊದಲ ಮೂರು ಸಾಲಿನ ನಿಷೇಧಕಕ್ಕೂ , ಕೊನೆಯ ಸಾಲಿನ ನಿಷೇಧಕಕ್ಕೂ ಇರುವ ಸಂಬಂಧ – ವ್ಯತ್ಯಾಸ , ಪರಿಮಿತಿ – ಶಕ್ತಿಗಳನ್ನು ಗುರುತಿಸಿದ್ದಾರೆ. ೩) ಕೂಡಲ ಸಂಗಮ ದೇವಾ – ಎಂಬ ಪದ(ಪುಂಜ) ಕೆರಳಿಸುವ ಕುತೂಹಲವನ್ನು ವಿಶ್ಲೇಷಿಸುತ್ತಾ : ”…