Browsed by
Tag: Biographies

ಲಂಕೇಶ್ – ಮಾಧ್ಯಮ ಮತ್ತು ಅಭಿವ್ಯಕ್ತಿ

ಲಂಕೇಶ್ – ಮಾಧ್ಯಮ ಮತ್ತು ಅಭಿವ್ಯಕ್ತಿ

ಪುಸ್ತಕ ವಿಮರ್ಶೆ ವ್ಯಕ್ತಿ ಮೂಲತಃ ಕ್ರಿಯಾತ್ಮಕನಾದ ಅವನ ಅಭಿವ್ಯಕ್ತಿಯೂ ಸಹ radical ಆಗಿರುತ್ತದೆ. ಇದರ ಮೂಲಕ ತನ್ನ ಸಮಾಜಕ್ಕೆ ಸ್ಪಂದಿಸುತ್ತಾನೆ. ಈ ರೀತಿ ಸ್ಪಂದಿಸುವುದಕ್ಕಾಗಿ ಒಂದು ಮಾಧ್ಯಮವನ್ನು ಕಂಡುಕೊಳ್ಳುತ್ತಾನೆ.ಸಮಾಜದ ಸಂಕೀರ್ಣತೆಯೊಡನೆ ಬೆರೆತು ಸಂಕೀರ್ಣ ಅನುಭವವನ್ನು ಪಡೆಯುತ್ತಾನೆ. ಸಮಕಾಲೀನ ಸಮಸ್ಯೆಯನ್ನು ಅಭಿವ್ಯಕ್ತಿಸುವಾಗ ತಕ್ಷಣ ಯಾವ ನಿರ್ಧಾರಕ್ಕೆ ಬರುವುದು ಕಷ್ಟವಾಗುತ್ತದೆ. ಆಗ ಆತ ಬುದ್ದಿವಂತನಾಗಿದ್ದರೆ suggestive ಆಗುತ್ತಾನೆ. ಈ ರೀತಿ suggestive ಆಗಿ ಸಮಾಜಕ್ಕೆ ತನ್ನ ಮಾಧ್ಯಮದಿಂದ ಜನರನ್ನು ಯೋಚನೆಗೆ ತೊಡಗಿಸುತ್ತಾನೆ. ಈ ರೀತಿ ಲಂಕೇಶರು ತಮ್ಮ ಮಾಧ್ಯಮಗಳನ್ನು ಬದಲಾಯಿಸುತ್ತಾ ಬಂದು ಈಗ ಒಂದು ವಿಶಾಲ canvas ಉಳ್ಳ ಮಾಧ್ಯಮವನ್ನು ತಲುಪಿದ್ದಾರೆ. ಸಾಹಿತ್ಯ ಕೇವಲ ‘ವಿದ್ಯಾವಂತ’ ರಿಗೆ ಮಾತ್ರ ತಲುಪುವ ಮಾಧ್ಯಮ. ಆದರೆ ಸಿನಿಮಾ ಶ್ರಾವಣ – ದೃಶ್ಯಗಳಿಂದ ಕೂಡಿದ್ದು ‘ವಿದ್ಯಾವಂತ’ ಅವಿದ್ಯಾವಂತರವರೆಗೂ ತಲುಪುವ ಮಾಧ್ಯಮ….

Read More Read More

ಸಮಗ್ರ ಚರಿತ್ರೆಗೆ ಕೈಚಾಚಿದ ಜೇರ್ಡ್ ಡೈಮಂಡ್

ಸಮಗ್ರ ಚರಿತ್ರೆಗೆ ಕೈಚಾಚಿದ ಜೇರ್ಡ್ ಡೈಮಂಡ್

ತಿಂಗಳು –ನವೆಂಬರ್ ೨೦೦೯ ನಾವಾಗಲೇ ಮಾನವ ಜನಾಂಗದ ಚರಿತ್ರೆಯನ್ನು ಅರಿಯಲು ನಾನಾ ವಿಧಾನಗಳನ್ನು ಅನುಸರಿಸುತ್ತಿದ್ದೇವೆ. ರಾಜ-ಮಹಾರಾಜರ ಚರಿತ್ರೆ ಕಾರಣ- ಕದನ-ಫಲಿತಾಂಶವನ್ನು ಮುಂದಿಟ್ಟುಕೊಂಡು ಬರೆದ ಚರಿತ್ರೆ, ಡಾರ್ವಿನ್ನಿನ ವಿಕಾಸವಾದವನ್ನು ಆಧರಿಸಿ ಬರೆದ ಚರಿತ್ರೆ ಮಾರ್ಕ್ಸ್ ವಾದವನ್ನು ಆಧರಿಸಿದ ಚರಿತ್ರೆ ಇತ್ಯಾದಿ. ಅಲ್ಲದೆ ಇವುಗಳ ಒಳಪದರಗಳಿಂದ ಮೂಡಿಬಂದ ಸಾಮಾಜಿಕ, ರಾಜಕೀಯ, ಆರ್ಥಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಕಂಡಿದ್ದೇನೆ. ಜನಾಂಗೀಯ, ವರ್ಣನೀತಿಯಿಂದ ರಚಿತವಾದ ಚರಿತ್ರೆಗಳನ್ನ ನಾವು ಕಂಡಿದ್ದೇವೆ. ಈ ನಮ್ಮ ಬಹುಪಾಲು ಚರಿತ್ರೆಗಳು ಲಿಖಿತ ಆಧಾರಗಳ ಮೇಲೆ ನಿಂತಿವೆ. ಅಂದರೆ ಸುಮಾರು ಮೂರು ಸಾವಿರ ವರ್ಷಗಳ ಚರಿತ್ರೆ ಮಾತ್ರ ದಕ್ಕಿದೆ. ಮನುಷ್ಯ ಬರವಣಿಗೆ ಕಂಡುಹಿಡಿದಿದ್ದು ಆ ಕಾಲದಲ್ಲಿ; ಆದರೆ ಅವನು ಸುಮಾರು ೭ ಮಿಲಿಯ ವರ್ಷಗಳಿಂದ ಈ ಭೂಮಿಯ ಮೇಲೆ ಬದುಕುತ್ತಾ ಬಂದಿದ್ದಾನೆ. ಇದಕ್ಕೆ ಹೋಲಿಸಿದರೆ ಬರವಣಿಗೆ ಅತ್ಯಂತ…

Read More Read More

ಅಸಲಿ ವಿದ್ವಾಂಸನ ಅಕ್ಷರವಿಲ್ಲದ ಚರಿತ್ರೆ

ಅಸಲಿ ವಿದ್ವಾಂಸನ ಅಕ್ಷರವಿಲ್ಲದ ಚರಿತ್ರೆ

Tingalu – August 2009 ೧೯೮೩ ರ ಡಿಸೆಂಬರ್ ತಿಂಗಳ ಚುಮುಚುಮು ಚಳಿಗಾಲ. ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ನಾಲ್ಕು ವಾರಗಳ ಕಾಲ’ ಸಂಜ್ಞಾಶಾಸ್ತ್ರ ಮತ್ತು ಸಂರಚನವಾದ ‘ದ ಅಂತರ್ರಾಷ್ಷ್ಟ್ರೀಯ ಶಿಬಿರ ಏರ್ಪಟಿಸಿತ್ತು . ವಿಶ್ವದ ದಿಗ್ಗಜ ಭಾಷಾಶಾಸ್ತ್ರಜ್ಞರು ಬಂದಿಳಿದ್ದಿದ್ದರು . ಅಲ್ಲಿ ಶೈಕ್ಷಣಿಕ ವಾತಾವರಣ ಸೃಷ್ಟಿಯಾಗಿತ್ತು . ನಮ್ಮಂಥ ಕಿರಿಯರಿಗೆ ಬೌದ್ಧಿಕ ಹಬ್ಬ . ೮೦ ವರ್ಷದ ಋಷಿ ಸದೃಶ ಅಮೇರಿಕಾದ ಡೇವಿಡ್ ಸಾವನ್ , ಜರ್ಮನಿಯ ರೋಲಾನ್ಡ್ ಪೋಸ್ನರ್ . ಕೆನಡಾದ ಟೊರೊಂಟೋ ವಿಶ್ವವಿದ್ಯಾಲಯದ ಪಾಲ್  ಬ್ಯುಸ್ಸಾಕ್ , ಫ್ರಾನ್ಸಿನ ಕ್ರಾಮವೆಲ್, ಭಾರತದ ಅಶೋಕ ಕೇಲ್ಕರ್ , ಆರ್ .ಏನ್ .ಶ್ರೀವಾಸ್ತವ ಮುಂತಾದ ವಿದ್ವಾಂಸರ ಸಂಗಮವಾಗಿತ್ತು . ಇವರೆಲ್ಲರ ಜೊತೆಯಲ್ಲಿ ನಾವು ಬಹುನಿರೀಕ್ಷೆಯಲ್ಲಿದ್ದ ಮತ್ತೊಬ್ಬ ವಿದಾಂಸ ಫ್ರಾನ್ಸಿನ ಮಿಶೆಲ್ ಫುಕೋ…

Read More Read More

ಮಾನವತಾವಾದಿ ಮಾನವ ಶಾಸ್ತ್ರಜ್ಞ – ಕ್ಲಾಡ್ ಲೆವಿ ಸ್ಟ್ರಾಸ್

ಮಾನವತಾವಾದಿ ಮಾನವ ಶಾಸ್ತ್ರಜ್ಞ – ಕ್ಲಾಡ್ ಲೆವಿ ಸ್ಟ್ರಾಸ್

Tingalu – June 2009 ೨೦ ನೇ ಶತಮಾನದ ಬುದ್ದಿಜೀವಿಗಳಲ್ಲಿ ಅತ್ಯಂತ ಪ್ರಮುಖನೆಂದು ಪರಿಗಣಿಸಲ್ಪಟ್ಟವನು ಕ್ಲಾಡ್ ಲೆವಿ ಸ್ಟ್ರಾಸ್. ಹೋದ ವರ್ಷ ತನ್ನ ನೂರನೇ ಜನ್ಮದಿನವನ್ನು ಆಚರಸಿಕೊಂಡ. ಇಡೀ ಜಗತ್ತಿನ ಚಿಂತಕರು ಇವನ ನೂರನೇ ಹುಟ್ಟುಹಬ್ಬವನ್ನು ಅತ್ಯಂತ ವಿಜ್ರುಂಭಣೆಯಿಂದ ಆಚರಿಸಿದರು. ಫ್ರಾನ್ಸ್ನಲ್ಲಿ ಇಡೀ ವರ್ಷವನ್ನು ಆತನ ಶತಮಾನೋತ್ಸವ ವರ್ಷವೆಂದು ಪರಿಗಣಿಸಿ ೧೯೮ ವಿದ್ವಾಂಸರಿಂದ ಅವನ ಜೀವನ ಮತ್ತು ಕೃತಿಗಳ ಮೇಲೆ ಲೇಖನಗಳನ್ನು ಬರೆಸಿದರು . ಕೇವಲ ಆರು ವಾರಗಳಲ್ಲಿ ಈ ಪುಸ್ತಕದ ಇಪ್ಪತ್ತು ಸಾವಿರ ಪ್ರತಿಗಳು ಮಾರಾಟವಾದವು. ಫ್ರಾನ್ಸಿನ ಪ್ರತಿಷ್ಠಿತ ಪ್ರಕಾಶನ ಇನ್ನು ಬದುಕಿರುವ ವಿದ್ವಾಂಸನೊಬ್ಬನ ಬಗ್ಗೆ ಪ್ರಕಟಿಸಿದ ಮೊದಲ ಕೃತಿಯಿದು. ಹೀಗೆ ಈತನು ಬದುಕಿರುವಾಗಲೇ ದಂತಕತೆಯಾಗಿದ್ದಾನೆ. ಬೌದ್ದಧರ್ಮದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಈತ ಭಾರತದ ಎಲ್ಲೋರಾ ಮತ್ತು ಅಜಂತಾ ದೇವಾಲಯಗಳಿಗೆ…

Read More Read More

ಅಮೆಜಾನ್ ಕಾಡಿನಲೊಬ್ಬ ಮಹಾ ಮಾಂತ್ರಿಕ ‘ಗುಡ್ಡ’

ಅಮೆಜಾನ್ ಕಾಡಿನಲೊಬ್ಬ ಮಹಾ ಮಾಂತ್ರಿಕ ‘ಗುಡ್ಡ’

Tingalu – June 2009 ನೂರಕ್ಕೆ ತೊಂಬತ್ತು ಭಾಗ ಔಷದಿ ಸಸ್ಯಗಳು ನಮ್ಮ ಬುಡಕಟ್ಟು ಜನಾಂಗಗಳು ವಾಸಿಸುವ ಕಾಡುಗಳಲ್ಲಿ ಸಿಗುವಂತವು. ಆದರೆ ಅಧುನಿಕ ಬದುಕಿನ ದಾಪುಗಾಲಿಗೆ ಸಿಕ್ಕಿ ಬಹುಪಾಲು ಕಾಡುಗಳು ನಾಶವಾಗುತ್ತಿವೆ. ಕಾಡಿನ ಮೂಲ ಜ್ಞಾನವಿರುವುದು ಬುಡಕಟ್ಟು ಜನಾಂಗಗಳಲ್ಲಿ. ಸಾವಿರಾರು ವರ್ಷಗಳಿಂದ ಇವರು ಕಾಡಿನಲ್ಲಿ ಬದುಕುತ್ತ , ತಮಗೆ ಬರುತ್ತಿರುವ ಅನೇಕ ಖಾಯಿಲೆಗಳನ್ನು ವಾಸಿಮಾಡಲು ಈ ಕಾಡಿನ ಸಸ್ಯಗಳನ್ನು ಉಪಯೋಗಿಸುತ್ತಿದ್ದಾರೆ. ಆದರೆ ಇತ್ತೀಚಿನ ವರದಿಯ ಪ್ರಕಾರ ಪ್ರಪಂಚದಲ್ಲಿ ಒಂದು ನಿಮಿಷಕ್ಕೆ ೧೦೦ ಎಕರೆಯಷ್ಟು ಅರಣ್ಯ ನಾಶವಾಗುತ್ತಿದೆ . ಪ್ರಪಂಚದಲ್ಲಿರುವ ಸಸ್ಯದಲ್ಲಿ ಶೇ .೧೦ ನಿರ್ನಾಮವಾಗುತ್ತಿವೆ. ಕಾಡಿನಲ್ಲಿದ್ದ ಬುಡಕಟ್ಟು ಜನಾಂಗದವರನ್ನು  ಕಾಡಿನಿಂದ ಹೊರಗೆ ಹಾಕುವುದರ ಮೂಲಕ ಅವರಿಗಿದ್ದ ಜಾನಪದ ವೈದ್ಯ ಜ್ಞಾನವನ್ನು ನಾಶ ಮಾಡಲಾಗುತ್ತಿದೆ. ಈ ಜ್ಞಾನಪದ್ಧತಿಯನ್ನು ಕಾಪಾಡಿಕೊಂಡು ಬರುತ್ತಿರುವವರು ಮುಖ್ಯವಾಗಿ ಬುಡಕಟ್ಟು ಜನಾಂಗದ…

Read More Read More